TSK

TSK · ಅರಣ್ಯಕಾಂಡ 27:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.

ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.

ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.

ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.

ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.

ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

ಆದರೆ ಯೇಸು ಹೇಳಿದ್ದೇನೆಂದರೆ ‹“ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ”› ಅಂದನು.

‹ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.›

ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.