TSK

TSK · ಅರಣ್ಯಕಾಂಡ 27:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.

¶ ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.

ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.