TSK

TSK · ಅರಣ್ಯಕಾಂಡ 28:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.

ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.

ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.

ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.

ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.