TSK

TSK · ಅರಣ್ಯಕಾಂಡ 28:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.

ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.

ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.

ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.

“ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.

ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.

ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.

¶ “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”

ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.

ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.

ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.

ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.

ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.