TSK

TSK · ಅರಣ್ಯಕಾಂಡ 28:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.