¶ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
TSK
TSK · ಅರಣ್ಯಕಾಂಡ 30:2
Treasury of Scripture Knowledge references in ಕನ್ನಡ IRV.
ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
¶ “ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,
ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
¶ ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.
¶ ‹“ಮತ್ತು, ನೀನು ಸುಳ್ಳಾಣೆಯಿಡಬಾರದು;›‹‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.›
¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›
¶ ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.
“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”