ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.
TSK
TSK · ಅರಣ್ಯಕಾಂಡ 31:3
Treasury of Scripture Knowledge references in ಕನ್ನಡ IRV.
“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
“ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.
ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.