¶ ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.
TSK
TSK · ಅರಣ್ಯಕಾಂಡ 32:23
Treasury of Scripture Knowledge references in ಕನ್ನಡ IRV.
¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.
ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.