ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
TSK
TSK · ಅರಣ್ಯಕಾಂಡ 35:12
Treasury of Scripture Knowledge references in ಕನ್ನಡ IRV.
ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.
ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.