ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
TSK
TSK · ಅರಣ್ಯಕಾಂಡ 35:20
Treasury of Scripture Knowledge references in ಕನ್ನಡ IRV.
ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.
ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.
¶ ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.
ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,
ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.
ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.