TSK

TSK · ಅರಣ್ಯಕಾಂಡ 4:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’

ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.

¶ ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.

ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.

ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.

ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

¶ ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.

ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.

ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.