ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
TSK
TSK · ಅರಣ್ಯಕಾಂಡ 5:18
Treasury of Scripture Knowledge references in ಕನ್ನಡ IRV.
ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
¶ “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
‹ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.›