TSK

TSK · ಅರಣ್ಯಕಾಂಡ 5:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ನಾನು ಹಣಕೊಡದೆ ಅದರ ಸಾರವನ್ನು ಅನುಭವಿಸಿ, ಅದರ ದಣಿಗಳ ಪ್ರಾಣ ಹಾನಿಗೆ ಕಾರಣನಾಗಿದ್ದರೆ,

ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.

ಯೇಸು ಅವನಿಗೆ, ‹“ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು›‹ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,”› ಎಂದು ಉತ್ತರ ಕೊಟ್ಟನು.

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›