TSK

TSK · ಅರಣ್ಯಕಾಂಡ 5:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.

ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.