¶ “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.
TSK
TSK · ಅರಣ್ಯಕಾಂಡ 5:29
Treasury of Scripture Knowledge references in ಕನ್ನಡ IRV.
¶ “ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು” ಎಂದು ಹೇಳಿದನು.
¶ “‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,
ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.