TSK

TSK · ಅರಣ್ಯಕಾಂಡ 5:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.

ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.

¶ “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ

ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.