TSK

TSK · ಅರಣ್ಯಕಾಂಡ 6:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.

ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.

ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.

ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.

ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.

ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

‹ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ”› ಅಂದನು.

‹ನೀನು ನನಗೆ ಕೊಟ್ಟ ಕೆಲಸವನ್ನು ನಾನು›‹ನೆರವೇರಿಸಿ›‹ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.›

ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.