TSK

TSK · ಅರಣ್ಯಕಾಂಡ 7:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.

ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.

ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.

ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.