¶ “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
TSK
TSK · ಅರಣ್ಯಕಾಂಡ 9:13
Treasury of Scripture Knowledge references in ಕನ್ನಡ IRV.
ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
¶ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
“ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.
ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.
¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.