TSK

TSK · ಅರಣ್ಯಕಾಂಡ 9:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.

ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.

¶ “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.

¶ ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.