ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
TSK
TSK · ಓಬದ್ಯ 1:15
Treasury of Scripture Knowledge references in ಕನ್ನಡ IRV.
ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.
ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.
¶ ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.
ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”
ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.
ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”
ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.