ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
TSK
TSK · ಓಬದ್ಯ 1:18
Treasury of Scripture Knowledge references in ಕನ್ನಡ IRV.
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.
“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.
ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
¶ ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,