ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
TSK
TSK · ಓಬದ್ಯ 1:7
Treasury of Scripture Knowledge references in ಕನ್ನಡ IRV.
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
¶ ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
ಅದಕ್ಕೆ ಪ್ರಸವವೇದನೆಯಾಗುತ್ತಾ ಇದೆ; ಅದು ಮಂಕು ಮಗುವಿನಂತಿದೆ; ಈ ಸಮಯವು ಗರ್ಭದ್ವಾರದಲ್ಲಿ ನಿಲ್ಲತಕ್ಕ ಸಮಯವಲ್ಲ.
¶ “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.