TSK

TSK · ಫಿಲಿಪ್ಪಿಯವರಿಗೆ 3:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’

ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.

ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,

‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!

ಆತನು ತಿರುಗಿಕೊಂಡು ಪೇತ್ರನಿಗೆ, ‹“ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ”› ಎಂದು ಹೇಳಿದನು.

‹ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.›

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.

ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.

ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.

ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.

ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,

ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.

¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.

ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.

ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.

¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.

ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.