ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.
TSK
TSK · ಫಿಲಿಪ್ಪಿಯವರಿಗೆ 3:6
Treasury of Scripture Knowledge references in ಕನ್ನಡ IRV.
ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.›
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
¶ “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.