TSK

TSK · ಫಿಲಿಪ್ಪಿಯವರಿಗೆ 3:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.

ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.

ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.

¶ ‹“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.›

¶ ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.

¶ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, ‹“ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.›

‹“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ› ‹ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು› ‹ಕರ್ತನು ನನ್ನ ಒಡೆಯನಿಗೆ ನುಡಿದನು’› ‹ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.›

‹ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.›

‹ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.›

ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.

ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.

ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.

ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.

ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.

ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.