ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.
TSK
TSK · ಫಿಲಿಪ್ಪಿಯವರಿಗೆ 4:12
Treasury of Scripture Knowledge references in ಕನ್ನಡ IRV.
ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”
ಆಗ ಆತನು ಅವರಿಗೆ, ‹“ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ”› ಎಂದು ಹೇಳಿದನು.
ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,
“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”
ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.
ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.