TSK

TSK · ಫಿಲಿಪ್ಪಿಯವರಿಗೆ 4:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

¶ ‹“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ;›‹ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.›

¶ ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, ‹“ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.›

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.

ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.

¶ ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.

ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.

ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.

ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.

ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.

ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.