ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
TSK
TSK · ಫಿಲಿಪ್ಪಿಯವರಿಗೆ 4:3
Treasury of Scripture Knowledge references in ಕನ್ನಡ IRV.
ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
¶ “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.
¶ ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
¶ ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
¶ ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,
‹ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.›‹ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,›‹ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.›
ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.