ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.
TSK
TSK · ಙ್ಞಾನೋಕ್ತಿಗಳು 1:11
Treasury of Scripture Knowledge references in ಕನ್ನಡ IRV.
ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.
ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.
‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.