ಕೀರ್ತನೆಗಳು 1:1
TSK
ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
TSK
Treasury of Scripture Knowledge references in ಕನ್ನಡ IRV.
ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.
ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.
ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.
ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.