ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
TSK
TSK · ಙ್ಞಾನೋಕ್ತಿಗಳು 1:4
Treasury of Scripture Knowledge references in ಕನ್ನಡ IRV.
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.
ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.