ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
TSK
TSK · ಙ್ಞಾನೋಕ್ತಿಗಳು 10:21
Treasury of Scripture Knowledge references in ಕನ್ನಡ IRV.
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.
ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.
ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›
¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.