ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.
TSK
TSK · ಙ್ಞಾನೋಕ್ತಿಗಳು 10:3
Treasury of Scripture Knowledge references in ಕನ್ನಡ IRV.
ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.
ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.
ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!
¶ ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, ‹“ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.›
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.