ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
TSK
TSK · ಙ್ಞಾನೋಕ್ತಿಗಳು 10:4
Treasury of Scripture Knowledge references in ಕನ್ನಡ IRV.
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,