TSK

TSK · ಙ್ಞಾನೋಕ್ತಿಗಳು 13:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.

‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›

ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.