¶ ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
TSK
TSK · ಙ್ಞಾನೋಕ್ತಿಗಳು 14:16
Treasury of Scripture Knowledge references in ಕನ್ನಡ IRV.
ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.
¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?
ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.
¶ ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,