“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.
TSK
TSK · ಙ್ಞಾನೋಕ್ತಿಗಳು 14:2
Treasury of Scripture Knowledge references in ಕನ್ನಡ IRV.
¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
‹ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ”› ಅಂದನು.
¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.
ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,