ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
TSK
TSK · ಙ್ಞಾನೋಕ್ತಿಗಳು 14:29
Treasury of Scripture Knowledge references in ಕನ್ನಡ IRV.
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.
ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›
¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.