ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
TSK
TSK · ಙ್ಞಾನೋಕ್ತಿಗಳು 15:25
Treasury of Scripture Knowledge references in ಕನ್ನಡ IRV.
ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).
ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.
ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
¶ “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.
¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”