ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?
TSK
TSK · ಙ್ಞಾನೋಕ್ತಿಗಳು 15:29
Treasury of Scripture Knowledge references in ಕನ್ನಡ IRV.
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”