TSK

TSK · ಙ್ಞಾನೋಕ್ತಿಗಳು 17:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.

ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.

ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.

ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,

ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.