TSK

TSK · ಙ್ಞಾನೋಕ್ತಿಗಳು 18:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.

ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.

ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.

¶ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?

ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.

ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.