ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.
TSK
TSK · ಙ್ಞಾನೋಕ್ತಿಗಳು 19:12
Treasury of Scripture Knowledge references in ಕನ್ನಡ IRV.
ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.
ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
¶ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.