ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.
TSK
TSK · ಙ್ಞಾನೋಕ್ತಿಗಳು 19:16
Treasury of Scripture Knowledge references in ಕನ್ನಡ IRV.
ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.
ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.
ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›