ವಿಮೋಚನಕಾಂಡ 23:1
TSK
¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
TSK
Treasury of Scripture Knowledge references in ಕನ್ನಡ IRV.
¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
¶ ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.
ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
¶ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.