ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
TSK
TSK · ಙ್ಞಾನೋಕ್ತಿಗಳು 20:1
Treasury of Scripture Knowledge references in ಕನ್ನಡ IRV.
¶ ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.
ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.
ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.
ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,