¶ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.
TSK
TSK · ಙ್ಞಾನೋಕ್ತಿಗಳು 21:13
Treasury of Scripture Knowledge references in ಕನ್ನಡ IRV.
ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
‹ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.›
‹ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.›
‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.