ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
TSK
TSK · ಙ್ಞಾನೋಕ್ತಿಗಳು 21:6
Treasury of Scripture Knowledge references in ಕನ್ನಡ IRV.
ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.