ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.
TSK
TSK · ಙ್ಞಾನೋಕ್ತಿಗಳು 22:23
Treasury of Scripture Knowledge references in ಕನ್ನಡ IRV.
ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.
ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
ಯೆಹೋವನು ನೀತಿಯನ್ನು ಸಾಧಿಸುವವನಾಗಿ, ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.
ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”
ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.